ಬೆಂಗಳೂರು, ಏಪ್ರಿಲ್ 08: ಕಳೆದ ಮೂರು ವರ್ಷಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಶೇ 15 ಕ್ಕಿಂತ ಹೆಚ್ಚು ಕುಸಿದಿದೆ. 2022-23ನೇ ಶೈಕ್ಷಣಿಕ ಸಾಲಿನಿಂದ ಈವರೆಗೆ ರಾಜ್ಯದ ಸರ್ಕಾರಿ ಶಾಲೆಗಳಿಂದ (Government School) ಸುಮಾರು ಆರರಲ್ಲಿ ಒಬ್ಬ ವಿದ್ಯಾರ್ಥಿ (Student) ತೊರೆಯುತ್ತಿದ್ದಾನೆ ಅಥವಾ ಬೇರಡೆ ವಲಸೆ ಹೋಗಿದ್ದಾನೆ ಎಂದು ಶಿಕ್ಷಣ ಇಲಾಖೆಯ ಇತ್ತೀಚಿನ ಅಂಕಿ ಅಂಶಗಳು ಬಹಿರಂಗಪಡಿಸಿವೆ. 2022-23 ಶೈಕ್ಷಣಿಕ ಸಾಲಿನಿಂದ 2025-26ನೇ ಸಾಲಿನವರೆಗೆ ಒಟ್ಟು ಸುಮಾರು 7 ಲಕ್ಷ ವಿದ್ಯಾರ್ಥಿಗಳು ಸರ್ಕಾರಿ ಶಾಲೆಯನ್ನು ಬಿಟ್ಟಿದ್ದಾರೆ. ಸರ್ಕಾರವು ದಾಖಲಾತಿ ಇಳಿಕೆಗೆ ಪೋಷಕರು ತಮ್ಮ ಮಕ್ಕಳಿಗೆ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ನೀಡಬೇಕೆಂಬ ಆಸೆ, ಕೇಂದ್ರ ಪಠ್ಯಕ್ರಮದ ಮೆಚ್ಚುಗೆ, ವಲಸೆ ಮತ್ತು ಖಾಸಗಿ ಶಾಲೆಗಳ ಹೆಚ್ಚಳವನ್ನು ಕಾರಣ ನೀಡಿದೆ. ಸರ್ಕಾರಿ ಶಾಲೆಗಳ ದಾಖಲಾತಿ ವಿವರಗಳು: 2022-2345,46,5232023-2442,94,4612024-2540,74,5252025-2638,45,845 ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸರ್ಕಾರದ ಪ್ರಮುಖ ಯೋಜನೆಯಾದ ಕರ್ನಾಟಕ ಪಬ್ಲಿಕ್ ಶಾಲೆಗಳು (KPS) ಕುರಿತು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಖಾಸಗಿ ಶಾಲೆಗಳ ಸ್ಪರ್ಧೆಗೆ ಉತ್ತರವಾಗಿ ಸರ್ಕಾರವು KPS ಅನ್ನು ರೂಪಿಸಿದೆ. KPS ಶಾಲೆಗಳು ಕಿಂಡರ್ಗಾರ್ಟನ್ನಿಂದ 12ನೇ ತರಗತಿವರೆಗೆ (K-12) ಒಂದೇ ಆವರಣದಲ್ಲಿ ಶಿಕ್ಷಣ ನೀಡುವ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಪ್ರಸ್ತುತ ರಾಜ್ಯದಲ್ಲಿ 309 KPS ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಇನ್ನೂ ಸುಮಾರು 900 ಶಾಲೆಗಳನ್ನು KPS ಆಗಿ ಮೇಲ್ದರ್ಜೆಗೆ ಏರಿಸಲಾಗುತ್ತಿದೆ. 2010 ರಿಂದ 2025ರ ಅವಧಿಯಲ್ಲಿ ಹಲವಾರು ಸರ್ಕಾರಿ ಶಾಲೆಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ದ್ವಿಭಾಷಾ ಪೂರ್ವ ಪ್ರಾಥಮಿಕ ವಿಭಾಗಗಳನ್ನು ಆರಂಭಿಸಲಾಗಿದೆ. ಒಟ್ಟು 9,522 ಸರ್ಕಾರಿ ಶಾಲೆಗಳಲ್ಲಿ 1 ರಿಂದ 5ನೇ ತರಗತಿವರೆಗೆ ದ್ವಿಭಾಷಾ ಶಿಕ್ಷಣ ನೀಡಲಾಗುತ್ತಿದೆ. ಈ ವರ್ಷದ ಜೂನ್ 30ರವರೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ರಾಜ್ಯವ್ಯಾಪಿ ದಾಖಲಾತಿ ಅಭಿಯಾನವನ್ನು ನಡೆಸುತ್ತಿದೆ. ಇದರ ಉದ್ದೇಶ ಕನಿಷ್ಠ ಶೇ 5 ರಷ್ಟು ದಾಖಲಾತಿ ಹೆಚ್ಚಿಸುವುದಾಗಿದೆ. ಎಲ್ಲ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ವಿಶ್ವವಿದ್ಯಾಲಯ ಕಾಲೇಜುಗಳಿಗೆ ಶೇ 3 ರಿಂದ 5 ವರೆಗೆ ದಾಖಲಾತಿ ಹೆಚ್ಚಳದ ಗುರಿ ನೀಡಲಾಗಿದೆ. KPS ಶಾಲೆಗಳಿಗೆ ಶೇ 10 ರಷ್ಟು ದಾಖಲಾತಿ ಹೆಚ್ಚಳದ ಗುರಿ ನಿಗದಿಪಡಿಸಲಾಗಿದೆ. ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಒಟ್ಟು 57,651 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27 ಆರ್ಥಿಕ ವರ್ಷದಲ್ಲಿ 15,000 ಶಿಕ್ಷಕರನ್ನು ನೇಮಕ ಮಾಡುವುದಾಗಿ ಘೋಷಿಸಿದ್ದಾರೆ. ಪ್ರಸ್ತುತ, ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 34,027 ಅತಿಥಿ ಶಿಕ್ಷಕರು ಮತ್ತು ಪ್ರೌಢಶಾಲೆಗಳಲ್ಲಿ 9,409 ಅತಿಥಿ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಮತ್ತುಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Post navigation Karnataka 2nd PUC Result 2026:- ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ಮಧು ಬಂಗಾರಪ್ಪ ವಿಜಯಪುರದ ಕೆಜಿ ಮಾವಿಗೆ 1 ಲಕ್ಷ ರೂ.